Wednesday, December 16, 2009

ತರ್ಲೆ ಮಂಜ(ಗ)ನ ಬಾರ್ ಪುರಾಣ!!!!

ಮತ್ತೆ ಒಂದು ದಿವಸ ಮಂಜ, ಮನೋಜ ಮತ್ತೆ ನಾನು ಸೇರಿದ್ದೇವು. ಇವರಿಬ್ಬರನ್ನು ನಾನು ಎಷ್ಟೇ ತಪ್ಪಿಸಲು ಪ್ರಯತ್ನ ಪಟ್ಟರು ಬಿಡದೆ ಬಾರ್ ಗೆ ಹೊರಟು ನಿಂತರು.

ನಾನು ಕೇಳಬಾರದ ಒಂದು ಪ್ರಶ್ನೆ ಕೇಳಿಬಿಟ್ಟೆ. "ಯಾಕೆ ಇಷ್ಟು ಕುಡಿತಿರೋ"? ಎಂದು. ಆಗ ನಮ್ಮ ಮಂಜ ತನ್ನ ಮಾತಿನ ವರಸೆ ಶುರು ಹಚ್ಚಿಕೊಂಡ.

ಅತ್ಯಂತ ಪ್ರಾಚೀನ ಪುರಾಣಕ್ಕೆ ಸೇರಿದ್ದು ಈ ಬಾರ್ ಪುರಾಣ. ಇದಕ್ಕೆ ಇದು.. ಇದೆ ಪುರಾಣ ಇಷ್ಟನೇ ಅಧ್ಯಾಯದಲ್ಲಿ ಇರಬಹುದೆದೆಂದು ಊಹಿಸಲು ಅಸಾದ್ಯವಾದಷ್ಟು ಪ್ರಾಚೀನ ಪುರಾಣ. ಒಂದಾನೊಂದು ಕಾಲದಲ್ಲಿ ರಣಧೀರ ಎಂಬ ರಾಜ ಇದ್ದ. ಒಂದು ದಿವಸ ತನ್ನ ಮಹಾರಾಣಿಯ ಜೊತೆಗೆ ಜಗಳವಾಡಿದ. ಅವನ ಹೆಂಡತಿ ರಾಜನ ಮೇಲೆ ತುಂಬಾ ಕೋಪಗೊಂಡು ತವರುಮನೆಗೆ ಹೊರಟುಹೋದಳು. ಆಗ ರಾಜ ಅವಳ ಯೋಚನೆಯಲ್ಲೇ ಕಾಲ ಕಳೆಯುತ್ತಾ ಹುಚ್ಚನ ಹಾಗೆ ಅಲೆದಾಡುತ್ತ ಇದ್ದಾಗ... ಅವನ ಮಂತ್ರಿ ರಾಜನ ದುಃಖ ನೋಡಲಾರದೆ. ಅವನ ವೈದ್ಯ ನವೀನಚಂದ್ರನಿಗೆ ಅದನ್ನು ಅರುಹಿದ. ಆಗ ಆ ವೈದ್ಯ ಮನಸಿನ ನೋವನ್ನು ಮರೆಯುವ ಒಂದು ಔಷಧ ತಯಾರಿಸಿ ತಂದು ಮಂತ್ರಿಗೆ ಕೊಟ್ಟ. ಮಂತ್ರಿ ಖುಷಿಯಾಗಿ ಅವನಿಗೆ 100 ವರಾಹ ಕೊಟ್ಟು ಕಳುಹಿಸಿದ. ಅದನ್ನು ರಾಜನಿಗೆ ಕುಡಿಸಿದಾಗ... ರಾಜ ತುಂಬಾ ಮನೋಲ್ಲಾಸಗೊಂಡು ಮಂತ್ರಿಗೆ.. ಕಂತ್ರಿ ಕಂತ್ರಿ ಎಂದು ಹೇಳಲಾರಂಬಿಸಿದ. ಅದೇ ಶಬ್ದ ಬಾಯಿಂದ ಬಾಯಿಗೆ ಹರಿದು "ಕ೦ಟ್ರಿ" ಪಾನ ಆಯಿತು.

ರಾಜ ಪಾನವಿಲ್ಲದೆ ಬದುಕಲು ಅಸಾಧ್ಯವಾಯಿತು. ದಿನ ನಿತ್ಯ ಮುಂಜಾನೆ ಇಂದ ಸಂಜೆವರೆಗೆ ಪಾನ ಮತ್ತನಾಗಿ ಇರುತ್ತಿದ್ದ. ಇದು ಅವನ ಹೆಂಡತಿಗೆ ತಿಳಿಯಿತು. ಮಹಾರಾಣಿ ಮತ್ತೆ ತನ್ನ ಗಂಡನ ಅರಮನೆಗೆ ಹಿಂತಿರುಗಿದಳು. ಆಗ ಮಹಾರಾಜ ಅದನ್ನು ಸಾವಕಾಶವಾಗಿ ಬಿಡಲು ಆರಂಬಿಸಿದ.


ರಾಜ ಹೆಂಡತಿ ಬಂದ ಮೇಲೆ ಅದನ್ನು ಬಿಟ್ಟದ್ದರಿಂದ ಮತ್ತು ಅದು ಹೆಂಡತಿ ಇಲ್ಲದಿದ್ದಾಗ ಸವತಿಯ ಹಾಗೆ ಕೆಲಸ ಮಾಡಿದ್ದರಿಂದ ಹೆಂಡ ಎಂಬ ಮತ್ತೊಂದು ನಾಮಾಂಕಿತ ಪಡೆದು ಪ್ರಸಿದ್ದಿಪಡೆಯಿತು. ರಾಜ ಅದನ್ನು ಮೊದಲು ಸೇವಿಸಿದ್ದರಿಂದ ಅದೇ ಹೆಸರಿನ ಪೇಯ ಇಗಲೂ ತುಂಬಾ ಪ್ರಸಿದ್ದಿ ಪಡೆದಿದೆ.


ಮುಂದೆ ಆ ವೈದ್ಯ ಈ ಪೇಯದಿಂದ ತುಂಬಾ ಪ್ರಸಿದ್ದಿ ಪಡೆದ. ಮತ್ತು ಅದನ್ನು ಇನ್ನಷ್ಟು ವಿನ್ಯಾಸಗೊಳಿಸಿದ. ಆಗ ಮಂತ್ರಿ ಅವನಿಗೆ ಅವನ ಉದ್ಯೋಗವಾದ "ವೈದ್ಯ" ಮತ್ತೆ ಅವನ ಹೆಸರಿನ(ನವೀನಚಂದ್ರ) ಮೊದಲ ಅಕ್ಷರ ಸೇರಿಸಿ "ವೈನ" ಎಂದು ನಾಮಕರಣ ಮಾಡಿ ಮಾರುಕಟ್ಟೆಗೆ ಬಿಟ್ಟ. ಅದು ತುಂಬಾ ಪ್ರಸಿದ್ದಿ ಪಡೆಯಿತು.

ಅದಕ್ಕೆ ನಮ್ಮ ಮನೋಜ ಹೌದು ಹೌದು ಎಂದು ಗೋಣು ಅಲ್ಲಾಡಿಸುತ್ತ ಕುಳಿತಿದ್ದ.

ನಾನು ಸಾಕು ಬಿಡಪ್ಪ ನಿನ್ನ ಬಾರ್ ಪುರಾಣ ಎಂದೆ. ಆದರು ಮಂಜ ಕೇಳಲಿಲ್ಲ ನನಗೆ ಕಿವಿಗಳಿಗೆ ಬರೆ ಕೊಡುವ ಹಾಗೆ ತನ್ನ ಪುರಾಣ ಶುರು ಹಚ್ಚಿ ಕೊಂಡ.

ಲೇ ಇದಕ್ಕೆ ಶೆರೆ ಅಂತ ಏಕೆ? ಅಂತಾರೆ ಗೊತ್ತೇನು ಎಂದ. ನಾನು ಇಲ್ಲ ಎಂದೆ. ಶೇರ್ ಎಂದರೆ ಹಂಚಿಕೋ ಅಂತ ಅರ್ಥ ಎಂದ..

ಹೌದೌದು ಎಂದು ಮನೋಜ ಅವನ ಎ೦ಜಲದ ಗ್ಲಾಸ್ ಎತ್ತಿ ಕುಡಿಯುತ್ತಿದ್ದ. .

ಆಗ ನಾನು ತಿಳಿಯಿತು ಬಿಡು ಎಂದೆ.

ಲೇ ಅದಲ್ಲ ಕಣೋ, ನಮ್ಮ ಮನಸಿನ ಭಾವನೆಗಳನ್ನು ಹಂಚ್ಕೊಳ್ಳಲು ಒಂದು ವೇದಿಕೆ ಕಣೋ ಎಂದ. ಇಲ್ಲಿ ನಿಜವಾಗಿಯೂ ಚರ್ಚೆ ಆಗುವದು ನಮ್ಮ ಹೆಂಡತಿಯರ ಬಗ್ಗೆ ಅದಕ್ಕೆ ಶೇರ್ ಗೆ ಸ್ತ್ರೀಲಿಂಗ ಸೇರಿಸಿ ಶೆರೆ ಅಂತ ಕರೆದಿದ್ದಾರೆ ಹಿರಿಯರು ಎಂದ.

ನೀನು ಬೀರ್ ಕುಡಿ ಬೀರಬಲ್ಲ ತರಹ ಶ್ಯಾಣ್ಯ ಆಗುತ್ತೀಯ ಎಂದ.

ಹೆಂಡತಿ ಜಗಳವಾಡಿ ತವರುಮನೆಗೆ ಹೋದಾಗ "ಬಾರ" "ಬಾರ" ಎನ್ನುವ ಬದಲು ಬಾರಿಗೆ ಬಾ ಎಲ್ಲ ಮರೆಯುತ್ತೆ ಎಂದ.

ಅಷ್ಟೊತ್ಟಿಗಾಗಲೆ ಹೆಂಡತಿ ಫೋನ್ ಬಂತು ಖಾರವಾಗಿ ಎಷ್ಟೊತ್ತು ಮನೆಗೆ ಬರೋದು ಎಂದಳು.

ಅವರೀಬ್ಬರಿಗೂ ಬೇಗೆನೆ ಬೈ ಹೇಳಿ ಹೊರಟು ಹೋದೆ. ಇಲ್ಲದೇ ಇದ್ದರೆ ಎನ್ನು ಏನೇನೋ ಪುರಾಣ ಕೇಳುವ ಪರಿಸ್ತಿತಿ ಬರುತಿತ್ತು.

2 comments:

  1. ಗೋಪಾಲ್ ಸರ್
    ಮಜವಾಗಿದೆ ಕಥೆ
    ಪುರಾಣ ಹುಟ್ಟಿಕೊಂಡಿದ್ದು ಮನಜನ ತಲೆಯಲ್ಲಿ ಕುಡಿದ ಮೇಲೆಯೂ,
    ಕುಡಿಯುವುದಕ್ಕಿಂತ ಮೊದಲೋ :)
    ಬಹಳ ನಗು ಬಂತು

    ReplyDelete
  2. ಹೆಗಡೆ ಸರ್ ,
    ಮಂಜ ಕುಡಿದ ಮೇಲೆ ದೇವರು ಆಗೋದು ....
    ತುಂಬಾ ಧನ್ಯವಾದಗಳು ....

    ReplyDelete